ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪುತ್ತೂರು: ಸಂಪ್ಯ ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಡಿ.13 ಮತ್ತು 14 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವಕ್ಕೆ ಡಿ. 6 ರಂದು ಗೊನೆ ಮುಹೂರ್ತ ನೆರವೇರಿತು.


ಕ್ಷೇತ್ರದ ತಂತ್ರಿ ಪ್ರೀತಮ್ ಪುತ್ತೂರಾಯ ಇವರ ನೇತೃತ್ವದಲ್ಲಿ‌ ದೇವಸ್ಥಾನದಲ್ಲಿ ಪೂಜೆ ಪ್ರಾರ್ಥನೆ ನೆರವೇರಿಸಿದ ಬಳಿಕ ಕ್ಷೇತ್ರದ ಅಧ್ಯಕ್ಷ ಗಂಗಾಧರ್ ಅಮೀನ್ ಇವರ ತೋಟದಿಂದ ಅರ್ಚಕ ಮೋಹನ್ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಗೊನೆ ಕಡಿಯಲಾಯಿತು.

ದೇವಸ್ಥಾನದ ಅಧ್ಯಕ್ಷ ಗಂಗಾಧರ ಅಮೀನ್ ಹೊಸಮನೆ, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳದಡ್ಡ, ಕೃಷ್ಣಪ್ಪಗೌಡ, ತಾರನಾಥ್ ಮೆರ್ಲ, ಜಯರಾಮ್ ಆಚಾರ್ಯ, , ಸುಗುಣ,ನಯನ ಪ್ರದೀಪ್ , ಪುಷ್ಪಲತಾ ಗಂಗಾಧರ್ ,ಸುನಂದಾ ಜಯರಾಮ್, ಪವನ್ ಶೆಟ್ಟಿ ಕಂಬಳತ್ತಡ್ಡ, ಶಿವಪ್ರಸಾದ್ ಶೆಟ್ಟಿ ,ಸುಭಾಷ್ ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here