ಆತೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ವೈದಿಕ ಕಾರ್ಯಕ್ರಮ

0

ರಾಮಕುಂಜ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದ ಅಭಿವೃದ್ದಿ ಕೆಲಸದ ಆರಂಭದ ಹಿನ್ನೆಲೆಯಲ್ಲಿ ಡಿ.13ರಂದು ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ ನಡೆಯಿತು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ಮಾರ್ಗದರ್ಶನದಲ್ಲಿ ಬೆಳಿಗ್ಗೆ ದೇವತಾ ಪ್ರಾಥನೆ, ಅನುಜ್ಞಾ ಕಲಶ ಪೂಜೆ, ಪಂಚಾಮೃತ ಅಭಿಷೇಕ, ಅನುಜ್ಞಾ ಪ್ರಾರ್ಥನೆ, ಅನುಜ್ಞಾ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಸಹಕರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಾಜ್ ಕುಮಾರ್ ರೈ, ವಿವಿಧ ಸಮಿತಿ ಸದಸ್ಯರು ಭಾಗವಹಿಸಿದ್ದರು. ದೇವಾಲಯದ ಛಾವಣಿ ರಿಪೇರಿ, ಧ್ವಜಸ್ತಂಭ ಮರದ ಕೆತ್ತನೆ ಮೊದಲಾದ ಅಭಿವೃದ್ದಿ ಕೆಲಸಗಳು ಸಾಯಂಕಾಲ ಭಕ್ತಾದಿಗಳಿಂದ ಶ್ರಮದಾನ ಮೂಲಕ ಆರಂಭಗೊಂಡಿತು.

LEAVE A REPLY

Please enter your comment!
Please enter your name here