ಬೆಳ್ತಂಗಡಿ:ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ದಿಂದ ಇಂದು ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ. *ನಾನು ಮತ್ತು NSS* ಎಂಬ ವಿಷಯದ ಕುರಿತು ತಾನು NSS ನಿಂದ ಪಡೆದು ಕೊಂಡ ಸ್ವಂತ ಅನುಭವದ ಜೊತೆಗೆ ತರಬೇತಿ ಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸರು ಮತ್ತು ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಬೆಳಿಯಪ್ಪ ಕೆ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಿ ಯದುಪತಿ ಗೌಡ ಇವರ ಮಾರ್ಗದರ್ಶನದಲ್ಲಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕ ರಾಮಕೃಷ್ಣ ಇವರ ಸ್ವಾಗತದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಧಿಕಾರಿ ಶಂಕರ್ ರಾವ್ ಇವರ ಉಪಸ್ಥಿತಿಯಲ್ಲಿ ಸುಮಾರು 100 ಸ್ವಯಂಸೇವಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.