ಮಚ್ಚಿನ: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಕದಿರ ಪೂಜೆ ನಡೆಯಿತು.
ಬಳಿಕ ಊರ ಭಕ್ತಾದಿಗಳಿಗೆ ಕದಿರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಎಂ ಹರ್ಷ ಸಂಪಿಗೆತ್ತಾಯ ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.
ದೇವಾಲಯದ ಅರ್ಚಕರಾದ ಲಕ್ಷ್ಮೀಶ್ ಭಟ್, ಸುನಿಲ್ ಭಟ್ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.