ಬೆಳ್ತಂಗಡಿ :ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಕೇಂದ್ರ ಕಚೇರಿ ಸಂಕೀರ್ಣಕ್ಕೆ ಶಿಲಾನ್ಯಾಸ ಸೆ.4 ರಂದು ನಡೆಯಿತು. ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಸಂಘದ ನಿವೇಶನ ದಲ್ಲಿ ಶಿಲಾನ್ಯಾಸ ನೆರವೇರಿಸಿ ಬಳಿಕ ಶ್ರೀ ನಾರಾಯಣ ಗುರು ಸಂಕೀರ್ಣದಲ್ಲಿ ನಡೆದ ಸಭೆಯಲ್ಲಿ ಆಶೀರ್ವಚನ ನೀಡಿದರು.
ಸಂಘದ ಅಧ್ಯಕ್ಷ ಯನ್. ಪದ್ಮನಾಭ ಮಾಣಿಂಜ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರು ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವ ಅಧ್ಯಕ್ಷ ಕೆ. ವಸಂತ ಬಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ಉಪಾಧ್ಯಕ್ಷ ಭಗೀರಥ ಜಿ.,
ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿರ್ದೇಶಕರುಗಳಾದ ಸುಜಾತಾ ವಿ. ಬಂಗೇರ, ತನುಜಾ ಶೇಖರ್, ಸಂಜೀವ ಪೂಜಾರಿ, ಗಂಗಾಧರ ಮಿತ್ತಮಾರು,
ಕೆ. ಪಿ. ದಿವಾಕರ, ಶೇಖರ ಬಂಗೇರ,
ಜಗದೀಶ್ಚಂದ್ರ ಡಿ.ಕೆ, ಚಂದ್ರಶೇಖರ್, ಧರನೇಂದ್ರ ಕುಮಾರ್, ಆನಂದ ಪೂಜಾರಿ, ಡಾ ರಾಜಾರಾಮ್ ಕೆ. ಬಿ.,ಜಯವಿಕ್ರಮ ಕಲ್ಲಾಪು, ಮುಖ್ಯಕಾರ್ಯನಿರ್ವಹಣಾಧಿಕಾರಿ
ಅಶ್ವಥ್ ಕುಮಾರ್, ವಿಶೇಷ ಅಧಿಕಾರಿ ಯಂ. ಮೋನಪ್ಪ ಪೂಜಾರಿ, ವಿವಿಧ ಶಾಖೆಯ ಮ್ಯಾನೇಜರ್ ಗಳು, ಸಿಬ್ಬಂದಿಗಳು, ಸದಸ್ಯರು ಹಾಜರಿದ್ದರು.