ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಪಾಲಕ-ಶಿಕ್ಷಕ ಸಭೆ

0

ಗುರುವಾಯನಕೆರೆ: ಇಲ್ಲಿಯ  ಎಕ್ಸೆಲ್ ಪದವಿಪೂರ್ವ ಕಾಲೇಜು  ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪಾಲಕ-ಶಿಕ್ಷಕರ ಸಭೆಯು ಸೆ.4ರಂದು ಸಂಸ್ಥೆಯ ವಠಾರದಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಶ್ರೀ ಸುಮಂತ್ ಕುಮಾರ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಮತ್ತು ವಿದ್ಯಾರ್ಥಿಗಳ ಜವಾಬ್ದಾರಿಗಳ ಬಗ್ಗೆ ವಿವರಿಸಿದರು. ಶಿಕ್ಷಣ ತಜ್ಞ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರ ಶ್ರೀ ಪುಷ್ಪರಾಜ್ ವಿಶ್ರಾಂತ ಪ್ರಾಂಶುಪಾಲರು, ಚಿನ್ಮಯ ವಿದ್ಯಾಲಯ ಕಾಸರಗೋಡು ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿ ಹಾಗೂ ಪೋಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

ಸಂಸ್ಥೆಯ ಅಧ್ಯಕ್ಷ ಶ್ರೀ ಸುಮಂತ್ ಕುಮಾರ್ ಜೈನ್ ಹಾಗೂ ಕಾರ್ಯದರ್ಶಿ ಶ್ರೀ ಅಭಿರಾಮ್. ಬಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಯಾದ ಪೂರ್ವಿ ಮತ್ತು ತಂಡದವರು ಪ್ರಾರ್ಥಿಸಿದರು. ಉಪನ್ಯಾಸಕಿ ನಿಶಾ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಸುಜಾನಾ ವಂದಿಸಿದರು. ಉಪನ್ಯಾಸಕ ಶ್ರೀ ವಿಕಾಸ್ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here