ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲ ಸಂಘ ಬೆಳ್ತಂಗಡಿ ಹಾಗೂ ತಾಲೂಕು ಪಂಚಾಯತ್ ಇದರ ಕಾನೂನು ಅರಿವು ಕಾರ್ಯಕ್ರಮ

0

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ,  ವಕೀಲರ ಸಂಘ ಬೆಳ್ತಂಗಡಿ, ಹಾಗೂ ತಾಲೂಕು ಪಂಚಾಯತ್, ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ಸೆ.6ರಂದು  ತಾಲೂಕು ಪಂಚಾಯತ್ ಕಛೇರಿ ಬೆಳ್ತಂಗಡಿಯಲ್ಲಿ ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ವಿಜಯೇಂದ್ರ ಟಿ. ಹೆಚ್ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ನೆರವೇರಿಸಿದರು, ಕಾನೂನು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶ್ರೀ. ಕುಸುಮಾಧರ ಬಿ. ಕಾರ್ಯನಿರ್ವಾಹಕ ಅಧಿಕಾರಿಗಳು ಬೆಳ್ತಂಗಡಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಪ್ರಸಾದ್ ಅಧ್ಯಕ್ಷರು ವಕೀಲರ ಸಂಘ ಬೆಳ್ತಂಗಡಿ, ಶ್ರೀ ಶೈಲೇಶ್ ಆರ್. ಠೋಸರ್  ಪ್ರಧಾನ ಕಾರ್ಯದರ್ಶಿಗಳು ವಕೀಲರ ಸಂಘ ಬೆಳ್ತಂಗಡಿ, ಶ್ರೀಮತಿ ಪ್ರಿಯಾ ಆಗ್ನೇಸ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬೆಳ್ತಂಗಡಿ ಭಾಗವಹಿಸಿದರು.

ಪ್ರಿಯಾಂಕಾ ವಕೀಲರ ಸಂಘದ ಜೊತೆ ಕಾರ್ಯದರ್ಶಿ , ಸಂಪನ್ಮೂಲಗಳು ವ್ಯಕ್ತಿಯಾಗಿ ಶ್ರೀ ಶಿವಯ್ಯ ಎಸ್. ಎಲ್ ವಕೀಲರು ಬೆಳ್ತಂಗಡಿ , ಕಾನೂನುಗಳ ಬಗ್ಗೆ ಸೂಕ್ತ ಮಾಹಿತಿ ನೀಡಿದರು.  ಮಮ್ತಾಜ್ ವಕೀಲರು ಬೆಳ್ತಂಗಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮತ್ತು ಧನ್ಯವಾದವನ್ನುಸಂಜೀವಿನಿ ತಾಲೂಕು ಸಂಯೋಜಕರು ಜಯಾನಂದ ನೆವೇರಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಹಾಗೂ ಸಂಜೀವಿನಿ ಒಕ್ಕೂಟ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here