ಪೆರೋಡಿತ್ತಾಯಕಟ್ಟೆ: ಸ ಉ ಪ್ರಾ ಶಾಲೆ ಪೆರೋಡಿತ್ತಾಯಕಟ್ಟೆ ಯಲ್ಲಿ ಸೆ.9ರಂದು ನಾರಾವಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು.
ಈ ಕಾರ್ಯಕ್ರಮದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷ ಹೇಮಂತ್ ರವರು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ವೇದಿಕೆಯಲ್ಲಿ ಪೆರೋಡಿತ್ತಾಯಕಟ್ಟೆ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರಘುನಾಥ್ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಅಲಿ ಮಾರು , ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಹೆಗ್ಡೆ , ಬಳಂಜ ಗ್ರಾಮ ಪಂಚಾಯಿತಿ ಸದಸ್ಯರಾದ ನಿಜಾಮುದ್ದೀನ್, ಪ್ರಸನ್ನ, ಲೀಲಾವತಿ, ಬಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ , ಪೆರೋಡಿತ್ತಾಯಕಟ್ಟೆ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ಕಿರಣ್ ಕುಮಾರ್, ನಾರಾವಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಭಾಕರ ನಾರವಿ,ನಾರಾವಿ ವಲಯದ ಕ್ರೀಡಾ ಸಂಯೋಜಕರಾದ ಕೃಷ್ಣಪ್ಪ ಪೂಜಾರಿ ಶಾಲಾ ಮುಖ್ಯ ಶಿಕ್ಷಕಿ ಪದ್ಮಾವತಿ, ಉಪಸ್ಥಿತರಿದ್ದರು.
ನಾರಾವಿ ವಲಯದ 7 ಬಾಲಕರ ತಂಡ ಬಾಲಕಿಯರ 8 ತಂಡ ಭಾಗವಹಿಸಿದ್ದು, ಕ್ರೀಡಾಂಗಣವನ್ನು ಗಣ್ಯರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪ್ರೇಕ್ಷ ಮತ್ತು ತಂಡದವರು ಪ್ರಾರ್ಥಿಸಿ ಮುಖ್ಯ ಶಿಕ್ಷಕಿ ಪದ್ಮಾವತಿರವರು ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕಿ ಸರೋಜರವರು ವಂದಿಸಿದರು.ಶಿಕ್ಷಕಿ ಶುಭ, ಕಾರ್ಯಕ್ರಮವನ್ನು ನಿರ್ವಹಿಸಿದರು.