ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

0

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ (ರಿ) ಇದರ ವತಿಯಿಂದ ಪಿಲಿಮೊಗರು ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಶಿಬಿರವನ್ನು ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ   ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ ಕೇಸರಿ ಘಟಕದ ಅಧ್ಯಕ್ಷ ಪುರುಷೋತ್ತಮ್ ಪೂಜಾರಿ ವಹಿಸಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ಕೆವಿಜಿ ಡೆಂಟಲ್ ಕಾಲೇಜ್ ವಿಭಾಗ ಮುಖ್ಯಸ್ಥರು  ಪ್ರೊಫೆಸರ್ ಡಾll ಎಂ ಎಂ ದಯಾಕರ್,  ಪಂಜಿ ಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷರು ಸಂಜೀವ ಪೂಜಾರಿ, ಬಂಟ್ವಾಳ ತಾಲೂಕು ಘಟಕ ರಾಜ ಕೇಸರಿ ಅಧ್ಯಕ್ಷರು ಗುರುಪ್ರಸಾದ್ ,  ಮೋಹನ್ ಶೆಟ್ಟಿ, ಎಸ್ ಡಿಎಂ ಶಾಲೆ ಪಿಲಿಮೊಗರು ಅಧ್ಯಕ್ಷರು ಪ್ರಕಾಶ್ ಫರ್ನಾಂಡಿಸ್ , ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗತ್ತು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ನೂರಕ್ಕಿಂತ ಅಧಿಕ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here