ಗುರುವಾಯನಕೆರೆ: ಭಾರೀ ಮಳೆಗೆ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಕುವೆಟ್ಟು ಬಿಜೆಪಿ ಕಾರ್ಯಕರ್ತರು ಗುರುವಾಯನಕೆರೆಯಿಂದ ಜೈನ್ ಪೇಟೆ ವರೆಗೆ ರಸ್ತೆಯಲ್ಲಿರುವ ಗುಂಡಿಗಳನ್ನು ಶ್ರಮದಾನದ ಮುಖೇನ ತಾತ್ಕಾಲಿಕವಾಗಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಶ್ರಮದಾನದಲ್ಲಿ ಭಾರತೀಯ ಜನತಾ ಪಾರ್ಟಿಯ ಕುವೆಟ್ಟು ಶಕ್ತಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಭಾಗಿಯಾಗಿದ್ದರು.