ಉಜಿರೆ: ಪಶು ಸಂಗೋಪನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಉಜಿರೆ ಇದರ ಸಹಭಾಗಿತ್ವದಲ್ಲಿ ಉಜಿರೆ ಗ್ರಾಮದ ನಾನಾ ಕಡೆಗಳಲ್ಲಿ ಸಾಕು ನಾಯಿಗಳಿಗೆ ರೇಬಿಸ್ ಲಸಿಕೆ ಉಚಿತವಾಗಿ ನೀಡುವ ಕಾರ್ಯಕ್ರಮ ಸೆ.14ರಂದು ಉಜಿರೆ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ಯನ್ನು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ .ಆರ್. ಶೆಟ್ಟಿ, ನೆರವೇರಿಸಿದರು. ಮುಖ್ಯ ಅಥಿತಿಗಳಾಗಿ ಬೆಳ್ತಂಗಡಿ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಮಂಜ ನಾಯ್ಕ್ ಟಿ. ಸಿ ಭಾಗವಹಿಸಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಉಜಿರೆ ಪಶು ವೈದ್ಯ ಡಾ. ಯತೀಶ್ ಕುಮಾರ್ ,ಪಂಚಾಯತ್ ಕಾರ್ಯದರ್ಶಿ ಜಯಂತ್ ಯು. ಬಿ., ಪಂಚಾಯತ್ ಸದಸ್ಯರು ಪಶು ಆಸ್ಪತ್ರೆ ಸಿಬ್ಬಂದಿಗಳಾದ, ನಾಗಶೈನ್ ರಾವ್, ರಾಜವರ್ಮ, ಶ್ರೀಧರ ಮತ್ತು ಗಂಗಾಧರ್, ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.