ಕೊಕ್ಕಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಕೊಕ್ಕಡ ಇವರ ಆಶ್ರಯದಲ್ಲಿ ಪೋಷಣೆ ಮಾಸಾಚರಣೆಯ ಕಾರ್ಯಕ್ರಮವನ್ನು ಕೊಕ್ಕಡ ಅಂಬೆಡ್ಕರ್ ಭವನದಲ್ಲಿ ಸೆ.14ರಂದು ನಡೆಸಲಾಯಿತು.
ಗ್ರಾ.ಪಂ ಅಧ್ಯಕ್ಷ ಯೋಗೀಶ್ ಆಲಂಬಿಲ ಕಾರ್ಯಕ್ರಮ ಉದ್ಘಾಟಿಸಿದರು.
ವಲಯ ಮೇಲ್ವಿಚಾರಕಿ ವಿನೋದ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆರೋಗ್ಯ ಸುರಕ್ಷಾ ಅಧಿಕಾರಿ ಉಷಾ ಕಾಮತ್ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ವಿವರಿಸಿದರು.
ಗ್ರಾ.ಪಂ ಉಪಾಧ್ಯಕ್ಷ ಪವಿತ್ರ, ಗ್ರಾ.ಪಂ ಸದಸ್ಯರು, ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷರು, ಗ್ರಾ.ಪಂ ಕಾರ್ಯದರ್ಶಿ, ಪಂಚಾಯತ್ ಸದಸ್ಯರಾದ ಬೇಬಿ, ವಿಶ್ವನಾಥ್ ಕುಕ್ಕುದೋಳಿ ಸ್ತ್ರೀ ಶಕ್ತಿ ಸದಸ್ಯರು, ಸಂಜೀವಿನಿ ಒಕ್ಕೂಟದ ಎಂ ಬಿಕೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಹರಿಣಾಕ್ಷಿ ಹಾಗೂ ಕಮಲ ನಿರೂಪಣೆ ಹಾಗೂ ಸ್ವಾಗತಿಸಿದರು, ಅಂಗನವಾಡಿ ಕಾರ್ಯಕರ್ತೆ ಸರಿತ ಧನ್ಯವಾದಗೈದರು.