ಸಾವ್ಯ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜೀಯವರ ಜನ್ಮದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಸಾವ್ಯದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಉದ್ಘಾಟಿಸಿ ಶುಭಕೋರಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಯುವಮೊರ್ಚಾ ಅಧ್ಯಕ್ಷ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ,ಅಂಡಿಂಜೆ ಪಂಚಾಯತ್ ಅಧ್ಯಕ್ಷೆ ಜಯಂತಿ, ಮಂಡಲ ಉಪಾಧ್ಯಕ್ಷ ಸೀತರಾಮ್ ಬೆಳಾಲು, ಬೂತ್ ಸಮಿತಿ ಅಧ್ಯಕ್ಷ ರವಿ ಪೂಜಾರಿ, ಪಂಚಾಯತ್ ಸದಸ್ಯ ಹರೀಶ್ ಹೆಗ್ಡೆ, ಯುವಕ ಮಂಡಲ ಅಧ್ಯಕ್ಷ ರಕ್ಷಿತ್ ಆರ್, ಹಿಂದೂ ಜಾಗರಣ ವೇದಿಕೆ ಪ್ರಮುಖ ರಕ್ಷಿತ್ ಸಾವ್ಯ, ಎಸ್. ಡಿ.ಎಮ್.ಸಿ ಅಧ್ಯಕ್ಷ ದಯಾನಂದ ಪೂಜಾರಿ ,ಯುವಮೋರ್ಚಾ ಮಂಡಲ ಪದಾಧಿಕಾರಿಗಳಾದ ಡಿ. ವಿನೇಶ್, ಪ್ರಶಾಂತ್, ಯಶವಂತ, ಹರೀಶ್,ಸಂದೀಪ್, ಉದಯ್ ಸದಸ್ಯರು ಹಾಗೂ ಪಂಚಾಯತ್ ಅಧ್ಯಕ್ಷ ರುಗಳು, ಸದಸ್ಯರು ಉಪಸ್ಥಿತರಿದ್ದರು.