ಬೆಳ್ತಂಗಡಿ : ಅರಣ್ಯ ಇಲಾಖೆ ನಡೆಸಿದ 68ನೇ ವನ್ಯಜೀವಿ ಸಪ್ತಾಹದ ಆಚರಣೆಯ ಅಂಗವಾಗಿ ಏರ್ಪಡಿಸಿದ ಸ್ಪರ್ಧೆ ಗಳಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ರಸಪ್ರಶ್ನೆ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿನಿ ಶ್ರೀರಕ್ಷಾ ವನ್ಯಜೀವಿಗಳ ಚಿತ್ರ ಬಿಡಿಸುವಿಕೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.