ಲಾಯಿಲ: ಮಳೆನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ಮಹಿಳಾ ಸ್ತ್ರೀ ಶಕ್ತಿ ಸದಸ್ಯರಿಗೆ ತರಬೇತಿ

0

ಲಾಯಿಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಲ್ಯಾಲ ಗ್ರಾಮ ಪಂಚಾಯತ್ನಲ್ಲಿ ಮಳೆನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ಮಹಿಳಾ ಸ್ತ್ರೀ ಶಕ್ತಿ ಸದಸ್ಯರಿಗೆ ಸೆ.19ರಂದು ತರಬೇತಿ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಒಟ್ಟು 37 ಮಂದಿ ಹಾಜರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ  ಆಶಾ ಬೇನೆಡಿಕ್ತಾ ರವರು ಉಪಸ್ಥಿತರಿದ್ದರು. ಈ ತರಬೇತಿಯನ್ನು ಗ್ರಾಮ್ಸ್ ಸಂಸ್ಥೆಯ ಸಿಬ್ಬಂದಿ  ಪುಷ್ಪಲತಾರವರು ನೀಡಿದರು.

LEAVE A REPLY

Please enter your comment!
Please enter your name here