ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಸೆ.23 ರಂದು ಪೌರಕಾರ್ಮಿಕರ ದಿನಾಚರಣೆಯ ಕಾರ್ಮಿರಿಗೆ ವಿವಿಧ ಸ್ಪರ್ಧೆ, ಮನೋರಂಜನೆ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ವಹಿಸಿದ್ದರು.
ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ,ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್,ಪಟ್ಟಣ ಪಂಚಾಯತ್ ಸದಸ್ಯರು, ಮುಖ್ಯ ಅಧಿಕಾರಿ ರಾಜೇಶ್, ಸಿಬ್ಬಂದಿಗಳು, ಪೌರ ಕಾರ್ಮಿಕರು ಉಪಸ್ಥಿತರಿದ್ದರು.
ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಸನ್ಮಾನ, ಇ ಎಸ್ ಐ ಕಾರ್ಡ್ ವಿತರಣೆ, ಸುಚಿತ್ವ ಪರಿಕರಗಳ ಹಸ್ತಾಂತರ, ಹಾಗು ಜಿಲ್ಲಾ ಯೋಜನಾ ಆಯೋಗದ ವತಿಯಿಂದ ನೀಡಲಾದ ಅಭಿನಂದನಾ ಪತ್ರ ಪೌರ ಕಾರ್ಮಿಕರಿಗೆ ವಿತರಣೆ, ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.