ಬೆಳ್ತಂಗಡಿ: ನರೇಂದ್ರ ಮೋದಿಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಜೀವ ರಕ್ಷಕ ಲಸಿಕಾ ಅಭಿಯಾನ ಬೂಸ್ಟರ್ ಡೋಸ್ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸೆ.24ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ನೆರವೇರಸಿದರು.
ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಚಂದ್ರಕಾಂತ, ಉದ್ಯಮಿ ರಾಜೇಶ್ ಪ್ರಭು ಉಪಸ್ಥಿತರಿದ್ದರು.
ಅಭಿಯಾನ ಬಗ್ಗೆ ಮಂಡಲ ಬಿಜೆಪಿ ಉಪಾಧ್ಯಕ್ಷ ಸೀತರಾಮ್ ತಿಳಿಸಿದರು. ಪ್ರಮೋದ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.