ಬೆಳಾಲು : ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ, ಯುವ ವೇದಿಕೆ, ಮಹಿಳಾ ವೇದಿಕೆ ಬೆಳಾಲು ಗ್ರಾಮದ ವತಿಯಿಂದ ಬೆಳಾಲು ಗ್ರಾಮ ಆದರ್ಶ ನಗರ ಬಾಬು ಗೌಡರ ಪುತ್ರಿ ಶ್ವೇತಾ ಇವರು ತೀವ್ರ ಅನಾರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿರುವ ಇವರಿಗೆ ಸೆ. 24 ರಂದು ರೂ. 12500/ ಯನ್ನು ಗ್ರಾಮ ಸಮಿತಿಯ ಅಧ್ಯಕ್ಷ ವಿಜಯ ಗೌಡ ಸೌತೆಗದ್ದೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಧರ್ಮೇಂದ್ರ ಗೌಡ ಪುಚ್ಚೆಹಿತ್ತಿಲು, ಯುವ ವೇದಿಕೆಯ ಅಧ್ಯಕ್ಷ ಉಮೇಶ್ ಗೌಡ ಮಂಜೊತ್ತು, ಕಾರ್ಯದರ್ಶಿ ಸಂಜೀವ ಗೌಡ ಕಾಡಂಡ, ಗೌರವ ಅಧ್ಯಕ್ಷ ಮಹೇಶ್ ಪುಳಿತ್ತಡಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಕನ್ನಿಕಾ ಪದ್ಮ ಗೌಡ, ಕಾರ್ಯದರ್ಶಿ ಲತಾ ಕೇಶವ ಗೌಡ, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.