ಬಂದಾರು: ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರ ವತಿಯಿಂದ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹಾಗೂ ಬಂದಾರು ಗ್ರಾಮ ಪಂಚಾಯತ್ ಗೆ ಅಭಿನಂದನಾ ಸಮಾರಂಭವು ಸೆ.25ರಂದು ಬಂದಾರು ಹಾಲು ಉತ್ಪಾದಕರ ಸಭಾಭವನದಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಂದಾರು ಗ್ರಾ.ಪಂ ಅಧ್ಯಕ್ಷರಾದ ಪರಮೇಶ್ವರಿ ಜನಾರ್ದನ ಗೌಡ ಪುಯಿಲ ನೇರವೇರಿಸಿದರು. ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾದ ಮಮತಾ ಕೆಳೆಂಜಿಮಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ಅಭಿವೃದ್ಧಿಗೆ ಮತ್ತು ಆವರಣ ಗೋಡೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರು 5 ಲಕ್ಷ ಅನುದಾನ ಒದಗಿಸಿ ಸಂಘದ ರಸ್ತೆ ಕಾಂಕ್ರೀಟೀಕರಣಕ್ಕೆ ಬಂದಾರು ಗ್ರಾಮ ಪಂಚಾಯತ್ 1 ಲಕ್ಷ ಅನುದಾನ ಒದಗಿಸಿದ್ದು. ಈ ಹಿನ್ನಲೆಯಲ್ಲಿ ಅವರಿಗೆಅಭಿನಂದನಾ ಸಮಾರಂಭ ನಡೆಯಿತು. ಇದೇ ಸಂದರ್ಭದಲ್ಲಿ ನಿವೃತ್ತ ಉಪವ್ಯವಸ್ಧಾಪಕರು ಶ್ರೀನಿವಾಸ ಎಂ. ಹಾಗೂ ಸಂಘದ ಕಾಮಗಾರಿಯನ್ನ ನಿರ್ವಹಿಸಿ ಕೊಟ್ಟ ಅಭಿಯಂತರರಾದ ಕೇಶವ ಅಂಗಡಿಮಜಲು, ವಿಸ್ತರಣಾಧಿಕಾರಿಯಾದ ರಾಜೇಶ್ ಕಾಮತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ದ. ಕ. ಹಾಲು ಓಕ್ಕೂಟದ ಪಶು ವೈದ್ಯರಾದ ಜೀತೆಂದ್ರ ಪ್ರಸಾದ್,ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ,ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಹಾಗೂ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) , ಅಧ್ಯಕ್ಷರಾದ ಮಮತಾ.ಕೆ ಕಾರ್ಯನಿರ್ವಹಣಾಧಿಕಾರಿ ಭವ್ಯ ಕೆ.ಎಸ್ . ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.