ಉಜಿರೆ: ಶ್ರೀ.ಧ.ಮ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿನ ವಿದ್ಯಾರ್ಥಿಗಳು, ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳಾದ ಶಿವಕಿರಣ್, ನಿರೀಕ್ಷಾ, ಅಚಲ ಕ್ರಮವಾಗಿ ಹಾಸ್ಯ, ಹಿಂದಿ ಭಾಷಣ, ಹಿಂದಿ ಕಂಠಪಾಠದಲ್ಲಿ ವಿಜೇತರಾದರೆ ,ಶಿಖಾ, ಪಲ್ಲವಿ, ಮಧುಶ್ರೀ , ಶ್ರೇಯಾ, ವೇದಾಂತ್, ಆಲಾಪ್ ಕವ್ವಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ಶಾಲಾ ಶಿಕ್ಷಕರು ಮಾರ್ಗದರ್ಶನವನ್ನು ನೀಡಿರುತ್ತಾರೆ.