ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನವರಾತ್ರಿ ವಿಶೇಷ ಪೂಜೆ ಮತ್ತು ಭಜನೋತ್ಸವ ಹಾಗೂ ಯಕ್ಷಗಾನ ಬಯಲಾಟ ಸೆ.29 ರಂದು ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ವೇದವ್ಯಾಸ ಶಿಶು ಮಂದಿರ ಗುರುವಾಯನಕೆರೆ ಹಾಗೂ ಶ್ರೀ ಮಾಯಾ ಮಹೇಶ್ವರ ಬೆಳಾಲು ಭಜನಾ ಮಂಡಳಿ ಸದಸ್ಯರಿಂದ ಭಜನೋತ್ಸವ ಕಾರ್ಯಕ್ರಮ ಹಾಗೂ ದೇವರಿಗೆ ಮಹಾಪೂಜೆ,ಜರುಗಿತು.
ಜಿಲ್ಲೆಯ ಪ್ರಸಿದ್ಧ ತೆಂಕು ತಿಟ್ಟಿನ ಕಲಾವಿದರಿಂದ ದಕ್ಷ ಯಜ್ಞ ಎಂಬ ಪೌರಾಣಿಕ ಯಕ್ಷಗಾನ ಬಯಲಾಟ ನಡೆಯಿತು. ಭಜನಾ ಸೇವಾಕರ್ತರಾದ ಶ್ರೀಮತಿ ದೇವಕಿ ಕಿಟ್ಚಣ್ಣ ಶೆಟ್ಟಿ ಮತ್ತು ಮಕ್ಕಳು ರಾಯಿಮಾರ್ ರವರಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ ಮತ್ತು ಶ್ರೀ ದುರ್ಗಾ ಮಾತೃ ಮಂಡಳಿ ಸಮಿತಿ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.