ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನವರಾತ್ರಿ ವಿಶೇಷ ಪೂಜೆ ಮತ್ತು ಭಜನೋತ್ಸವ ಕಾರ್ಯಕ್ರಮ ಸೆ.30 ರಂದು ಜರುಗಿತು.
ಈ ಸಂದರ್ಭದಲ್ಲಿ ಪೂರ್ವಾಹ್ನ ಪುತ್ತೂರು ಶ್ರೀ ಶಿವಶಂಕರ ಭಜಕ ವೃಂದ ಭಜನಾ ಮಂಡಳಿ ಸದಸ್ಯರಿಂದ ಹಾಗೂ ರಾತ್ರಿ 7 ಗಂಟೆಗೆ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಸದಸ್ಯರಿಂದ ಭಜನೋತ್ಸವ ಕಾರ್ಯಕ್ರಮ ಹಾಗೂ ದೇವರಿಗೆ ಮಹಾಪೂಜೆ ನೆರವೇರಿಸಿದರು.
ನಾಳ ಗಂಪದಕೋಡಿ ವಸಂತ ಆಚಾರ್ಯ ಮತ್ತು ಸಹೋದರರು ಭಜನಾ ಸೇವೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಆರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವದಲ್ಲಿ ಪೂಜಾ ವಿಧಿವತ್ತಾಗಿ ಜರುಗಿತು.
ಶಶಿಧರ್ ಶೆಟ್ಟಿ ಹೀರ್ಯ,ಸತೀಶ್ ಭಂಡಾರಿ ನಾಳ, ಶ್ರೀಮತಿ ಮೀನಾಕ್ಷಿ ಮಡಿವಾಳ್ತಿ ಮತ್ತು ಮಕ್ಕಳಿಂದ ಮಧ್ಯಾಹ್ನ ಹಾಗೂ ರಾತ್ರಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ ಮತ್ತು ಶ್ರೀ ದುರ್ಗಾ ಮಾತೃ ಮಂಡಳಿ ಸಮಿತಿ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.