ಧರ್ಮಸ್ಥಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ .ಸಿ. ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಅಂಗವಾಗಿ ನವಜೀವನ ಸದಸ್ಯರ ಸಮಾವೇಶ ಮತ್ತು ಕೇಂದ್ರ ಒಕ್ಕೂಟಗಳ ಪದಗ್ರಹಣ ಸಮಾರಂಭ ಆ.2 ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ
ಜರಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಉದ್ಘಾಟನೆಯನ್ನು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಡಾ. ಹೇಮಾವತಿ ವಿ. ಹೆಗ್ಗಡೆಯವರು ನೆರವೇರಿಸಿದರು. ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಸಾಧಕರನ್ನು ಸನ್ಮಾನಿಸಿದರು.
ಎಲ್. ಎಚ್. ಮಂಜುನಾಥ್ ಅಶು ಭಾಷಣ ಮಾಡಿದರು. ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ, ಮುಂಬೈ ಉದ್ಯಮಿ ಆರ್.ಬಿ. ಹೆಬ್ಬಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಧರ್ಮಸ್ಥಳದ ಶ್ರದ್ಧಾ ಅಮಿತ್, ಧರ್ಮಸಾಮ್ರಾಜ್ಯ, ಎಸ್.ಕೆ.ಡಿ.ಆರ್.ಡಿ.ಪಿ. ಬಿ.ಸಿ.ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್., ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ.ವಸಂತ ಸಾಲ್ಯಾನ್ ಕಾಪಿನಡ್ಕ, ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್, ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಿಸ್, ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಗೌರವ ಉಪಸ್ಥಿತರಿದ್ದರು. ಜ್ಯೋತಿಕ ನಾರಾವಿ, ನಿಂಗಪ್ಪ ನಲಿಕೆ ಕೊಕ್ಕಡ ಅನುಭವ ಹಂಚಿಕೊಂಡರು.
ಯೋಜನಾಧಿಕಾರಿಗಳಾದ ಯಶವಂತ್ ಮತ್ತು ಸುರೇಂದ್ರ , ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ಪ್ರಭಾಕರ ಮೊಸಂದೋಡಿ, ಜನಜಾಗೃತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ಶಾರದಾ ಆರ್. ರೈ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿಬಂಧು/ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಗಳು ಸದಸ್ಯರು, ನವ ಜೀವನ ಸಮಿತಿ ಸದಸ್ಯರು ಹಾಜರಿದ್ದರು.