ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಐಸಿಡಿಎಸ್ ದಿನಾಚರಣೆ

0

ಕಳಿಯ : ಇಲ್ಲಿಯ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಐಸಿಡಿಎಸ್ ದಿನಾಚರಣೆ ಆ.2 ರಂದು ಜರುಗಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಯಶೋಧ ಮಾತನಾಡುತ್ತಾ ಗಾಂಧಿ ಜಯಂತಿ ಮತ್ತು ಐಸಿಡಿಎಸ್ ಕಾರ್ಯಕ್ರಮದ ಬಗ್ಗೆ ಮಕ್ಕಳ ಪೋಷಕರಿಗೆ ಮಾಹಿತಿಯನ್ನು ನೀಡಿದರು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಭಾಷಿಣಿ ಜನಾರ್ದನ ಗೌಡ ಉಪಸ್ಥಿತರಿದ್ದು ಶುಭ ಹಾರೈಸಿದರು.ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಭಾರತಿ ಬೇಬಿ ಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಮಕ್ಕಳಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ಸ್ಥಳೀಯ ಅಬ್ದುಲ್ ಗಪೂರು ಕಲ್ಕುರ್ಣಿ ಬಹುಮಾನದ ಕೊಡುಗೆ ನೀಡಿದರು.

ಅಂಗನವಾಡಿ ಪುಟಾಣಿಗಳು ಸಮಿತಿ ಸದಸ್ಯರು ಮಕ್ಕಳ ಪೋಷಕಕರು ಬಾಗವಹಿಸಿದರು.ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಗೀತಾ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here