ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಮಹಾತ್ಮ ಗಾಂಧಿಜೀಯವರ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಪಕ್ಷದ ನಗರ ಘಟಕದ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ ಪುಷ್ಪಾರ್ಚನೆ ಮಾಡಿ, ಗಾಂಧೀಜಿಯರ ಸ್ವಾತಂತ್ರ್ಯದ ಕೊಡುಗೆ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ಆದರ್ಶ ಗುಣಗಳು ಸರ್ವಕಾಲಿಕ ಅಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು,ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಜಿಲ್ಲಾ ಯುವಕ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್, ಬ್ಲಾಕ್ ಕಾಂಗ್ರೆಸ್ ಪಕ್ಷದ ಹಿಂದುಳಿದ ಘಟಕದ ಅಧ್ಯಕ್ಷ ದಯಾನಂದ ದೇವಾಡಿಗ ವೇಣೂರು, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷಗಳಾದ, ಶ್ರೀ ವಿನ್ಸೆಂಟ್ ಡಿ ಸೋಜ ಮಡಂತಿಯಾರ್, ಶ್ರೀ ಖಾಲಿದ್ ಕೆ.ಎಚ್ ಉಜಿರೆ,ಬ್ಲಾಕ್ ಕಾಂಗ್ರೆಸ್ ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಂ ಗುರುವಾಯನಕೆರೆ, ಪ್ರಮುಖರುಗಳಾದ ಶ್ರಿಮತಿ ಸೌಮ್ಯ ಲಾಯಿಲ,ರಮೀಜ್ ಬೆಳ್ತಂಗಡಿ, ಜನಾರ್ಧನ್ ಕುಲಾಲ್,ಅವಿನಾಶ್ ಕೆ,ಅಬುಸಾಲಿ ಲಾಯಿಲ,ನರೇಶ್ ಮೇಲಂತಬೆಟ್ಟು, ರಿನ್ಸ್ ಮಾಚಾರು ಮೊದಲಾದವರು ಉಪಸ್ಥಿತರಿದ್ದರು.