ಬೆಳ್ತಂಗಡಿ: ಪ್ರತಿಷ್ಠಿತ ಭಾರತೀಯ ವೈದಕೀಯ ಸಂಘ ಕರ್ನಾಟಕ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನವರಾದ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಆಯ್ಕೆಯಾಗಿದ್ದಾರೆ.
ಜನಸ್ನೇಹಿ, ಸಮಾಜಮುಖಿ ಹೆಸರಾಂತ ವೈದ್ಯರಾಗಿರುವ ಡಾ. ಸದಾನಂದ ಪೂಜಾರಿಯವರು ಕಳೆದ ಹಲವು ವರ್ಷಗಳಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾರೆ. ಪ್ರತಿ ದಿನ 60 ಮಂದಿಗೆ ಡಯಾಲಿಸಿಸ್ ಮಾಡುವ ಮೂಲಕ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಕೀರ್ತಿಗೆ ವೆನ್ಲಾಕ್ ಆಸ್ಪತ್ರೆ ಪಾತ್ರವಾಗಿದೆ. ಇದಕ್ಕೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರ ಅವಿರತ ಶ್ರಮ ಸೇವೆಯೆ ಪ್ರಯತ್ನವೇ ಪ್ರಮುಖವಾಗಿದೆ.
ಡಾ. ಸದಾನಂದ ಪೂಜಾರಿಯವರು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಅಂಗಡಿಬೆಟ್ಟು ನಿವಾಸಿಯಾಗಿದ್ದಾರೆ. ಇವರ ಸೇವಗೆ ಜೇಸಿಐ ಅತ್ಯುತ್ತಮ ಯಂಗ್ ಇಂಡಿಯನ್ ಆವಾರ್ಡ್, ಕರ್ನಾಟಕ ಸೇವಾ ಪ್ರತಿಷ್ಠಾನದಿಂದ ಸಾಮಾಜಿಕ ಸೇವಾ ಪುರಸ್ಕಾರ, ಬೆಸ್ಟ್ ಸರ್ಜನ್ ಆವಾರ್ಡ್, ಹಾಗೂ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದೆ.