ಬೆಳ್ತಂಗಡಿ ಪಿ. ಎಲ್ ಡಿ ಬ್ಯಾಂಕ್ ಗೆ ರಾಜ್ಯ ಪ್ರಶಸ್ತಿ

0


ಬೆಳ್ತಂಗಡಿ : ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಗಳೂರು ವತಿಯಿಂದ ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಮಹಾ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಳೆಯವರು ಪ್ರಶಸ್ತಿ ಸ್ವೀಕರಿಸಿದರು.

2021-22 ನೇ ಸಾಲಿನಲ್ಲಿ ಬ್ಯಾಂಕಿನ ಸಾಲ ವಸೂಲಾತಿ, ಸಾಲ ವಿತರಣೆಯಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಕ. ರಾ. ಸ. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ಕೃಷ್ಣ ಕುಮಾರ್ ಡಿ., ಉಪಾಧ್ಯಕ್ಷ ಮಹಾಂತೇಶ್ ಗುರುಪಾದಪ್ಪ, ಜಿಲ್ಲಾ ನಿರ್ದೇಶಕ ರಾಜಶೇಖರ್ ಜೈನ್, ಸಹಕಾರ ಸಂಘಗಳ ಅಪಾರ ನಿಬಂಧಕ ಮತ್ತು ವ್ಯವಸ್ಥಾಪಕ ಜಿ. ಆರ್. ಲಿಂಗರಾಜು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕರು ಕರಿಯ ನಾಯ್ಕ, ಸಂತೋಷ್ ಜೈನ್, ನಾಮನಿರ್ದೇಶಕ ನಿರ್ದೇಶಕ ವೆಂಕಪ್ಪಯ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here