ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ ಇದರ ನೂತನ ಸಮುದಾಯ ಭವನದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಅ.17ರಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರುಗಿತ್ತು.
ಶಾಸಕ ಹರೀಶ್ ಪೂಜಾ ಶಿಲಾನ್ಯಾಸ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಗೌಡರಯಾನೆ ಒಕ್ಕಲಿಗರ ಸೇವಾ ಸಂಘ ಗೌರವಾಧ್ಯಕ್ಷ ಪದ್ಮ ಗೌಡ ವಹಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಜಯಾನಂದ ಗೌಡ, ಬೆಗೂರುಶ್ರೀ ನಾಗನಾಥೇಶ್ವರ ದೇವಸ್ಥಾನ ಟ್ರಸ್ಟ್ ನ ನಾರಾಯಣ ಗೌಡ,
ಜಿಲ್ಲಾ ಗೌಡರ ಸಂಘದ ಅಧ್ಯಕ್ಷ ಲೋಕಯ್ಯ ಗೌಡ, ಜಿಲ್ಲಾಯುವ ವೇದಿಕೆಯ ಕಾರ್ಯದರ್ಶಿ ಗಣೇಶ್, ತಾಲೂಕು ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಸ್ಪಂದನ ಸೇವಾ ಸಂಘ ಅಧ್ಯಕ್ಷ ಸುರೇಶ್ ಕೌಡಂಗೆ, ಉಪಾಧ್ಯಕ್ಷರಾದ ಕೃಷ್ಣಪ್ಪ ಗೌಡ, ನಾರಾಯಣ ಗೌಡ, ಮುಖ್ಯೋಪಾಧ್ಯಯರಾದ ಲಕ್ಷ್ಮೀನಾರಾಯಣ, ಪ್ರಾಂಶುಪಾಲ ಯದುಪತಿ ಗೌಡ, ಯುವ ವೇದಿಕೆಯ ಅಧ್ಯಕ್ಷ ಯಶವಂತ್ ಬನಂದೂರು, ಮಹಿಳಾ ವಿಭಾಗದ ಅಧ್ಯಕ್ಷೆ ಸುಭಾಶಿನಿ, ಜನಾರ್ಧನಗೌಡ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
ನಿರ್ದೇಶಕರಾದ ಗೋಪಾಲಕೃಷ್ಣ ಗೌಡ ಗೊಲ್ಲೋಡಿ ಸ್ವಾಗತಿಸಿದರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ಕಾರ್ಯದರ್ಶಿ ಮೋಹನ ಗೌಡ ಕಾರ್ಯಕ್ರಮ ನಿರೂಪಿಸಿದರು, ಸಂಘದ ಜತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಮ್ ಧನ್ಯವಾದ ಗೈದರು.