ಅಂಡಿಂಜೆ: ಗ್ರಾಮೀಣ ಕುಡಿಯುವ ನೀರು ಮತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹನೆ ತರಬೇತಿ ಕಾರ್ಯಗಾರವನ್ನು ಅ.17 ರಂದು ಆಯೊಜಿಸಲಾಯಿತು.
ಈ ತರಬೇತಿ ಯಲ್ಲಿ ಸಂಜೀವಿನಿ ಒಕ್ಕೂಟದ ಅದ್ಯಕ್ಷರಾದ ಆಶಾ, ಕಾರ್ಯದರ್ಶಿಯವರದ ಸವಿತಾ, MBK ಯವರದ ಮಲ್ಲಿಕಾರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ತ್ರೀ ಸಂಘದ ಸದಸ್ಯರು, ಗ್ರಾಮಸ್ಥರು ಸೇರಿ ಒಟ್ಟು 23ಮ೦ದಿ ಭಾಗವಹಿಸಿದ್ದರು. ಶ್ರೀಮತಿ ವಿಶಾಲಾಕ್ಷಿ ಮತ್ತು ರಂಜಾನ್ ಕುಮಾರ್ ರವರು ಮಳೆ ನೀರು ಕೊಯ್ಲು, ಘನ ತ್ಯಾಜ್ಯ ಮತು ದ್ರವ ತ್ಯಾಜ್ಯ ಘಟಕದ ಹಾಗೂ ಬೂದು ನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.