ಧರ್ಮಸ್ಥಳ :ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿದ ಕಟ್ಟಡ ಕಾರ್ಮಿಕರಿಗೆ 45 ಕಿ. ಮಿ. ವ್ಯಾಪ್ತಿಯಲ್ಲಿ ಕೆ. ಎಸ್. ಆರ್. ಟಿ. ಸಿ ಬಸ್ ಗಳಲ್ಲಿ ಪ್ರಯಾಣಿಸಲು ನೀಡಿರುವ ಉಚಿತ ಪಾಸ್ ಗಳನ್ನು ಅ.21 ರಂದು ಶಾಸಕ ಹರೀಶ್ ಪೂಂಜ ರವರು ಅರ್ಹ ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ವಿತರಿಸಿದರು.
ಈ ಸಂದರ್ಭ ದಲ್ಲಿ ಧರ್ಮಸ್ಥಳ ಘಟಕದ ಘಟಕ ವ್ಯವಸ್ಥಾಪಕ ಉದಯಶೆಟ್ಟಿ, ಸಿಬ್ಬಂದಿ ಮೇಲ್ವಿಚಾರಕ ಹೆಚ್. ಎಸ್.ರವಿ, ಹೆಚ್. ಪಿ.ರಾಜು ಚಾಲಕ ಭೋದಕರು ಹಾಜರಿದ್ದರು.