ಬೆಳ್ತಂಗಡಿ : 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಯಲ್ಲಿ ಅ.28ರಂದು ಜರುಗಿತು.
ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಪ್ರತಾಪ್ ಸಿಂಹ ನಾಯಕ್, ಭೂ ದಾಖಲೆ ಗಳ ಸಹಾಯಕ ನಿರ್ದೇಶಕರಾದ ರೇಣುಕಾ ನಾಯ್ಕ್, ತಾಲೂಕು ಕಚೇರಿಯ ಉಪ ತಹಶೀಲ್ದಾರ್ ರವಿಕುಮಾರ್,ಜಯ.ಕೆ ಆಹಾರ ನಿರೀಕ್ಷಕರು,
ಕಂದಾಯ ನಿರೀಕ್ಷಕರು, ಗ್ರಾಮ ಕಾರಣಿಕರು, ತಾಲೂಕು ಕಚೇರಿಯ ಸಿಬ್ಬಂದಿಗಳು, ಸರ್ವೇ ಇಲಾಖೆ ಸಿಬ್ಬಂದಿ ಗ್ರಾಮ ಸಹಾಯಕರು ಹಾಜರಿದ್ದರು.
ಉಪ ತಹಶೀಲ್ದಾರ್ ರವಿ ಕುಮಾರ್, ನಿರೂಪಣೆಯನ್ನು ಮಾಡಿದರು. ವಂದನಾರ್ಪಣೆಯನ್ನು ಹೇಮಾ . ಕೆ ನೆರವೆರಿಸಿದರು.