ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19ರಿಂದ 24ರ ತನಕ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದ್ದು, ಈ ಸಂದರ್ಭ ಲಕ್ಷಾಂತರ ಭಕ್ತರು ಆಗಮಿಸಲಿದ್ದು ಭಕ್ತರ ಅನುಕೂಲಕ್ಕೆ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಪತ್ರ ಮುಖೇನ ಮನವಿ ಮಾಡಿದ್ದಾರೆ.
ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73 ಗುರುವಾಯನಕೆರೆಯಿಂದ ಉಜಿರೆ ತನಕದ ರಸ್ತೆ ಹಾಗೂ ಕೇಂದ್ರ ಸರ್ಕಾರದಿಂದ ಸ್ಪರ್ ರಸ್ತೆಯಾಗಿ ಘೋಷಣೆಯಾಗಿರುವ ಪೆರಿಯಶಾಂತಿಯಿಂದ ಧರ್ಮಸ್ಥಳ ವರೆಗಿನ ರಸ್ತೆ ತೀರ ಹದಗೆಟ್ಟಿದ್ದು ಇದರಲ್ಲಿ ವಾಹನ ಸಂಚಾರ ಕಷ್ಟವಾಗಿದೆ.ಈ ರಸ್ತೆ ಸರಿಪಡಿಸಲು ಒಂದು ಕೋಟಿ ರೂ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು ವಿಭಾಗಕ್ಕೆ ಬಿಡುಗಡೆ ಮಾಡುವಂತೆ ವಿನಂತಿ ಮಾಡಿದ್ದಾರೆ ಇದಕ್ಕೆ ಸ್ಪಂದಿಸಿರುವ ಸಿಎಂ 1 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ.