ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರೊಂದಿಗೆ ಸಮಾಲೋಚನೆ ನಡೆಸಿದ ಶ್ರೀ ಪ್ರಣವಾನಂದ ಸ್ವಾಮೀಜಿ

0

ಬೆಳ್ತಂಗಡಿ:  ಚಿತಾಪುರ ಬ್ರಹ್ಮ ಶ್ರೀ ನಾರಾಯಣ ಗುರು ಶಕ್ತಿ ಪೀಠದ ಮುಖ್ಯಸ್ಥರಾದ  ಶ್ರೀ ಪ್ರಣವಾನಂದ ಸ್ವಾಮೀಜಿಯವರು ಬೆಳ್ತಂಗಡಿ ಹೇರಾಜೆ ಮನೆಗೆ ಆಗಮಿಸಿ ಜನವರಿ .6ರಿಂದ ಶ್ರೀ ಕ್ಷೇತ್ರ ಕುದ್ರೋಳಿಯಿಂದ ಬೆಂಗಳೂರು ವಿಧಾನಸೌಧ ವರಗೆ ನಡೆಯಲಿರುವ ಪಾದಯಾತ್ರೆಯ ಬಗ್ಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಜಿತೇಂದ್ರ ಎಸ್ ಸುವರ್ಣ ,ಪತ್ರಕರ್ತರಾದ ರಮೇಶ್ ಎಸ್ ಪೆರ್ಲ,ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಜಯರಾಮ್ ಬಂಗೇರ ಹೇರಾಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here