ಶ್ರೀ ಗುರುದೇವ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

0

ಬೆಳ್ತಂಗಡಿ : ಶ್ರೀ ಗುರುದೇವ ಎಜುಕೇಷನಲ್ ಟ್ರಸ್ಟ್ ನ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಅ.29 ಶ್ರೀ ಗುರುದೇವ ಪ. ಪೂ. ಕಾಲೇಜು ಸಭಾಂಗಣದಲ್ಲಿ ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರು ಮಾಜಿ ಶಾಸಕ ಕೆ. ವಸಂತ ಬಂಗೇರ ವಹಿಸಿದ್ದರು.

ಮಂಗಳೂರು ಯೂನಿವರ್ಸಿಟಿ ಉಪ ಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಶ್ರೀ ಗುರುದೇವ ಎಜುಕೇಷನಲ್ ಟ್ರಸ್ಟ್ ನ ಉಪಾಧ್ಯಕ್ಷ ಪದ್ಮನಾಭ ಮಾನಿಂಜೆ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು, ಟ್ರಸ್ಟ್ ನ ಸದಸ್ಯ ನಿವೃತ್ತ ಪೊಲೀಸ್ ವರಿಷ್ಟಧಿಕಾರಿ ಪೀತಾಂಬಾರ ಹೇರಾಜೆ, ಕಾರ್ಯದರ್ಶಿ ಧರ್ಮವಿಜೇತ್, ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ., ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳನ್ನು ಮತ್ತು ಪ್ರಥಮ ಪದವಿ ಹೊಸ ವಿದ್ಯಾರ್ಥಿಗಳನ್ನು ಉಪನ್ಯಾಸಕರುಗಳನ್ನು ಗೌರವಿಸಲಾಯಿತು. ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here