ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ರಾಷ್ಟ್ರಿಯ ಸೇವಾ ಯೋಜನೆ ಘಟಕದ ವತಿಯಿಂದ ಅ.28 ರಂದು ಕನ್ನ ಡ ರಾಜ್ಯೋತ್ಸವದ ಪ್ರಯುಕ್ತ ‘ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ’ ನನ್ನ ನಾಡು ನನ್ನ ಹಾಡು ಸಮೂಹ ಗೀತ ಗಾಯನ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯತು.
ಕನ್ನ ಡ ಹಾಡುಗಳಾದ ರಾಷ್ಟ್ರಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿಧ್ಯಾ ಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುದರ ಮೂಲಕ ಭಾಷಾಭಿಮಾನತ್ವವನ್ನು ಸಾರಲಾಯಿತು.
ಸೇಕ್ರೆಡ್ ಹಾರ್ಟ್ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ರೇ. ಫಾದರ್ ಬೇಜಲ್ ವಾಜ್ ಕಾರ್ಯಕ್ರಮಕ್ಕೆ ಶುಭಕೋರಿದರು. ಕಾಲೇಜಿನ ಪ್ರಾಂಶಪಾಲರಾದ ಡಾ. ಜೋಸೆಫ್ ಎನ್. ಎಂ ರವರು ನಮ್ಮ ನಾಡು ನುಡಿಯ ಬಗ್ಗೆ ಅಭಿಮಾನವಿರಬೇಕು, ಕನ್ನಡಿಗರೆಂದು ಗುರುತಿಸಿಕೊಳ್ಳಲು ಹೆಮ್ಮೆಪಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಜೋಸೆಫ್ ಎನ್ ಎಂ, ಕ್ಷೇಮ ಪಾಲನಾದಿಕಾರಿಗಳು, ರಾಷ್ಟ್ರಿಯ ಸೇವಾಯೋಜನಾಧಿಕಾರಿಗಳು , ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.