ಭಾರತೀಯ ಜನತಾ ಪಾರ್ಟಿ ಪರಿಶಿಷ್ಟ ಜಾತಿ ಮೋರ್ಚ, ಬೆಳ್ತಂಗಡಿ ಮಂಡಲದ ಕಾರ್ಯಕಾರಿಣಿ ಸಭೆ

0

ಬೆಳ್ತಂಗಡಿ:  ಭಾರತೀಯ ಜನತಾ ಪಾರ್ಟಿ ಪರಿಶಿಷ್ಟ ಜಾತಿ ಮೋರ್ಚ, ಬೆಳ್ತಂಗಡಿ ಮಂಡಲದ ಕಾರ್ಯಕಾರಿಣಿ ಸಭೆ ಹಾಗೂ ಪರಿಶಿಷ್ಟ ಜಾತಿ ಜಿಲ್ಲಾ ಸಮಾವೇಶದ ಪೂರ್ವಭಾವಿ ಸಭೆಯು
ಅ.31 ರಂದು ಬೆಳ್ತಂಗಡಿ ಕಚೇರಿ ಯಲ್ಲಿ  ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಬೆಳ್ತಂಗಡಿ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷರಾದ ಗೋಪಾಲ್ ಕೃಷ್ಣ ಕುಕ್ಕಳ ವಹಿಸಿದ್ದರು.

ಈ ಸಭೆಯಲ್ಲಿ ಬೆಳ್ತಂಗಡಿ ಮಂಡಲ ಎಸ್ಸಿ ಮೋರ್ಚಾ ಪ್ರಭಾರಿ ಕೊರಗಪ್ಪ ಗೌಡ,  ಜಿಲ್ಲಾ ಎಸ್ಸಿ ಮೋರ್ಚಾ ಉಪಾಧ್ಯಕ್ಷರುಗಳಾದ ಸದಾಶಿವ ಕರಂಬಾರು, ರಾಘವ ಕಲ್ಮoಜ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಸಿ.ಕೆ. ಚಂದ್ರಕಲಾ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಮತ್ತು ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಗರ್ಡಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವಸಂತಿ ನೆರಿಯ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here