ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆಯು ಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಮುಖ್ಯ ಅತಿಥಿಗಳಾಗಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುಲೈಮಾನ್ ಭೀಮಂಡೆಯವರು ರಾಜ್ಯೋತ್ಸವದ ಸಂದೇಶ ನೀಡಿದರು.
ವೇದಿಕೆಯಲ್ಲಿ ಎಲ್ಲಾ ಶಿಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ನೂರುನ್ನಿಹ ಮತ್ತು ಸ್ವಸ್ತಿಕ್ ರವರು ರಾಜ್ಯೋತ್ಸವದ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶ್ರಾವ್ಯ ಎಸ್ ವಿ ಯವರು ಸ್ವರಚಿತ ಕವನ ವಾಚಿಸಿದರು. ಲೋಕೇಶ್ ಪೂಜಾರಿ ಸ್ವಾಗತಿಸಿ, ವೈಷ್ಣವಿ ವಂದಿಸಿದರು, ಶಾರಿಯಾ ಖಾನಂ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಶಿಕ್ಷಕ ಸುಮನ್ ರವರ ಸಂಯೋಜನೆಯಲ್ಲಿ ಕಾರ್ಯಕ್ರಮ ಜರುಗಿತು.