ನೆರಿಯ: ಕಾಯರ್ತಡ್ಕದಿಂದ ಅಣಿಯೂರಿಗೆ ಪಿಕಪ್ ನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ತಿಳಿದ ಪುದುವೆಟ್ಟು ಕಾಯರ್ತಡ್ಕ ಬಜರಂಗದಳ ಕಾರ್ಯಕರ್ತರು ಆರೋಪಿಗಳನ್ನು ತಡೆದು ಪರಿಶೀಲಿಸಿದಾಗ ಗೋವುಗಳು ಪತ್ತೆಯಾಗಿರುವುದು ನ.2ರಂದು ಮುಂಜಾನೆ ತಿಳಿದು ಬಂದಿದೆ.
ಗೋವುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದು ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರಿಗೊಪ್ಪಿಸಿದ್ದಾರೆ.
ಆರೋಪಿಗಳಾದ ಆಜೀದ್ ಕಕ್ಕಿಂಜೆ, ರಫೀಕ್ ನೆರಿಯ, ಹಾಗೂ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.