ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಸಂಘೋತ್ಸವ- 2022

0

ಬೆಳ್ತಂಗಡಿ : ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ ಹಾಗೂ ಭಾಗ್ಯೋದಯ ಮಹಾಸಂಘ ನೆಟ್ಟಣ ಇವುಗಳ ಸಹಭಾಗಿತ್ವದಲ್ಲಿ ಮಹಿಳಾ ಸಂಘಗಳ ಬಲವರ್ಧನೆಯ ನಿಟ್ಟಿನಲ್ಲಿ ಸಂಘೋತ್ಸವ- 2022 ಎಂಬ ವಿನೂತನ ಕಾರ್ಯಕ್ರಮವನ್ನು ನ.4  ರಂದು ನೆಟ್ಟಣ ಸಂತ ಮೇರೀಸ್ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಜೋಸೆಫ್ ಚೀರನ್ ರವರು ದೀಪ ಬೆಳಗಿಸಿ ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘೋತ್ಸವ ಆಯೋಜನೆ ಮಾಡಿದ ಉದ್ದೇಶದ ಬಗ್ಗೆ ವಿವರಿಸಿದರು. ನೆಟ್ಟಣ ಭಾಗ್ಯೋದಯ ಮಹಾಸಂಘದ ಅಧ್ಯಕ್ಷರಾದ ಶ್ರೀಮತಿ ಕುಂಞಲಕ್ಷ್ಮೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉದ್ಘಾಟನಾ ಕಾರ್ಯಕ್ರಮದ ನಂತರ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಅಪರಾಹ್ನದ ನಂತರ ವಿವಿಧ ಹೊರಾಂಗಣ ಕ್ರೀಡೆಗಳನ್ನು ಆಯೋಜಿಸಿಲಾಯಿತು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಯಿತು. ಸಂತ ಸೆಬಾಸ್ಟಿಯನ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಸನೀಶ್ ಪುದುಪರಂಬಿಲ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸ್ಥಳೀಯ ನಿರ್ದೇಶಕರುಗಳು, ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗ, ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಸಿ.ವಿ, ಸ್ವಯಂ ಸೇವಕರಾಗಿ ದುಡಿದು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here