ಸವಣೂರು : ಇಲ್ಲಿನ ಆರೇಲ್ತಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು.ಸವಣೂರು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕುದ್ಮನಮಜಲು ಗಿಡನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂಧರ್ಭ ಶಾಲಾಭಿವೃದ್ದಿ ಸಮಿತಿ ಸದಸ್ಯ ಗಣೇಶ್ ಆರೆಲ್ತಡಿ, ಗಣೇಶ್ ಕೆಡೆಂಜಿ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಜಗನ್ನಾಥ್ ಅವರು ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿಯ ಕುರಿತು ಮಾಹಿತಿ ನೀಡಿದರು.ಶಿಕ್ಷಕರಾದ ದಯಾಮಣಿ, ಸರಿತಾ ಸಹಕರಿಸಿದರು.