ಉಜಿರೆ: ಪೆರ್ಲ- ಮುಂಡತ್ತೋಡಿ ರಸ್ತೆ ಅಭಿವೃದ್ಧಿಗೆ ರೂ. 2.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆಗೆ ಶಿಲಾನ್ಯಾಸ ನ.6 ರಂದು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರುಗಳಾದ ಗುರುಪ್ರಸಾದ್ ಕೋಟ್ಯಾನ್, ಮಂಜುನಾಥ ಗೌಡ,ಲಲಿತ ಮುಂಡತೊಡಿ, ಸವಿತಾ ಮೋಹಿನಿ ಲಲಿತ, ಬಿಜೆಪಿ ಎಸ್. ಟಿ.. ಮೋರ್ಚಾ ಅಧ್ಯಕ್ಷ ಚೆನ್ನಕೇಶವ, ಅಳದಂಗಡಿ ಸಹಕಾರ ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಎಚ್. ಪ್ರಕಾಶ್ ಶೆಟ್ಟಿ, ಊರಗಣ್ಯರು ವಿದ್ಯಾರ್ಥಿಗಳು, ವ್ಯಾಪಾರಸ್ಥರು, ಗ್ರಾಮಸ್ಥರು ಗುತ್ತಿಗೆದಾರ ನಾಗೇಶ್ ಉಪಸ್ಥಿತರಿದ್ದರು. ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು ಸ್ವಾಗತಿಸಿ ಉಪನ್ಯಾಸಕ ಕುಮಾರ ಹೆಗ್ಡೆ ನಿರೂಪಿಸಿದರು