ತಣ್ಣೀರುಪಂತ: ತಣ್ಣೀರುಪಂತ ವಲಯದಲ್ಲಿ 10 ನೇ ವರ್ಷದ ಪಾದಯಾತ್ರೆ ಪೂರ್ವಭಾವಿ ಸಭೆಯನ್ನು ಕಲ್ಲೇರಿ ಬಾಪೂಜಿ ಕೇಂದ್ರದಲ್ಲಿ ನಡೆಸಲಾಯಿತು.
ಈ ಸಭೆಯ ಅಧ್ಯಕ್ಷತೆಯನ್ನು ಮಾಜಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಪ್ರಭಾಕರ ಗೌಡ ಪೊಸೊಂದೋಡಿ ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಜನಜಾಗೃತಿ ತಾಲೂಕು ಸಮಿತಿಯ ಪದಾಧಿಕಾರಿಯವರಾದ ಗುಣಕರ ಅಗ್ನಾಡಿ, ಜನಜಾಗೃತಿ ವಲಯಾಧ್ಯಕ್ಷರಾದ ಮೋನಪ್ಪ ಗೌಡ ಪುತ್ತಿಲ,ವಲಯಾಧ್ಯಕ್ಷರಾದ ರಾಮಣ್ಣ ಗೌಡ, ಕರಾಯ ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷ ರಾಜಶೇಖರ್ ರೈ, ತಾಲೂಕು ಜನಜಾಗೃತಿ ಕಾರ್ಯದರ್ಶಿ ರಮೇಶ್ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಗ್ರಾಮದ ಪ್ರಮುಖರು, ಭಜನಾ ಮಂಡಳಿ ಸದಸ್ಯರು, ವಿಪತ್ತು ನಿರ್ವಹಣೆ ಸ್ವಯಂ ಸೇವಕರು, ಸೇವಾಪ್ರತಿನಿಧಿ ಉಪಸ್ಥಿತರಿದ್ದರು.
ಮೇಲ್ವಿಚಾರಕಿ ವಿದ್ಯಾ ಸ್ವಾಗತಿಸಿ, ಸೇವಾಪ್ರತಿನಿಧಿಗಳಾದ ಶಿವರಾಮ್ ನಿರೂಪಿಸಿ, ಪರಮೇಶ್ವರ್ ವಂದಿಸಿದರು.