ಬೆಳ್ತಂಗಡಿ: ಬೆಳ್ತಂಗಡಿ ವಲಯದ 10 ನೇ ವರ್ಷದ ಪಾದಯಾತ್ರೆ ಪೂರ್ವಭಾವಿ ಸಭೆಯು ನ 7ರಂದು ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದ ಪಿನಾಕಿಯಲ್ಲಿ ನಡೆಯಿತು
ಈ ಸಭೆಯ ಅಧ್ಯಕ್ಷತೆಯನ್ನು ನಿವೃತ್ತ ಡಿ.ವೈ ಎಸ್.ಪಿ ಪಿತಾಂಬರ ಹೆರಾಜೆ ವಹಿಸಿದ್ದರು.
ಪ್ರಾಸ್ತಾವಿಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಮಾತನಾಡಿದರು.
ವೇದಿಕೆಯಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್, 10ನೇ ವರ್ಷದ ಪಾದಯಾತ್ರೆಯ ವಲಯ ಅಧ್ಯಕ್ಷ , ನ್ಯಾಯತರ್ಪು ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ, ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮದ ಪ್ರಮುಖರು, ಭಜನಾ ಮಂಡಳಿ ಸದಸ್ಯರು, ಸೇವಾಪ್ರತಿನಿಧಿ ಉಪಸ್ಥಿತರಿದ್ದರು.
ಮೇಲ್ವಿಚಾರಕರಾದ ಹರೀಶ್ ಸ್ವಾಗತಿಸಿ ವಂದಿಸಿದರು.