ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇದರ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರಕವಾಗಿ ಶಾಶ್ವತ ಕಾಮಗಾರಿ ನಡೆಯುತ್ತಿದ್ದು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಮದ್ದಡ್ಕ ಇವರ ನೇತೃತ್ವದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಹಿರಿಯ ವಿಧ್ಯಾರ್ಥಿ ಸಂಘದ ಸದಸ್ಯರ ಹಾಗೂ ಶಾಲಾಭಿಮಾನಿಗಳ ಸಹಾಕಾರದಲ್ಲಿ ನ7 ರಂದು ಶ್ರಮದಾನ ಜರುಗಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಭಾಸ್ಕರ್ ಹಾಗೂ ಅಧ್ಯಾಪಕ ವೃಂದ, ಹಿರಿಯ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಬಿ ಶೆಟ್ಟಿ ಪೆರಂಗೊಡಿ ಹಾಗೂ ಪಧಾದಿಕಾರಿಗಳು ಪೋಷಕರು ಉಪಸ್ಥಿತರಿದ್ದರು.