ಶ್ರೀ ಧ .ಮಂ ಅ ಹಿ ಪ್ರಾ ಶಾಲೆ ಪುದುವೆಟ್ಟು ಶಾಲಾ ಮಕ್ಕಳಿಗೆ ಭ್ರಷ್ಟಾಚಾರ ಮುಕ್ತ ವಿಚಾರದ ಬಗ್ಗೆ ಪ್ರಬಂಧ ಸ್ಪರ್ಧೆ

0

ಪುದುವೆಟ್ಟು:  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಪೆಟ್ರೋನೆಟ್ ಎಂ ಹೆಚ್ ಬಿ ಲಿಮಿಟೆಡ್ ವತಿಯಿಂದ ಶಾಲಾ ಮಕ್ಕಳಿಗೆ ಭ್ರಷ್ಟಾಚಾರ ಮುಕ್ತ ಭಾರತ ಎನ್ನುವ ವಿಚಾರದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು,

ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪೆಟ್ರೋನೆಟ್ ಎಂ ಹೆಚ್ ಬಿ ಲಿಮಿಟೆಡ್ ನೆರಿಯ ಇಲ್ಲಿನ ವ್ಯವಸ್ಥಾಪಕರಾದ  ಮಹೇಶ್ ಹೆಗ್ಡೆ ಬಹುಮಾನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಯಾಗಬೇಕು ಈ ನಿಟ್ಟಿನಲ್ಲಿ ಮಕ್ಕಳು ಈವಾಗಿನಿಂದಲೇ ಯಾವುದೇ ಕ್ಷೇತ್ರಗಳಲ್ಲಿ ಲಂಚ ನೀಡುವುದಿಲ್ಲ ಎಂದು ದೃಢ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.

ಭ್ರಷ್ಟಾಚಾರ ಮುಕ್ತ ಭಾರತದ ಬಗ್ಗೆ ಶಾಲೆಯ ಹಿರಿಯ ಶಿಕ್ಷಕ ಜೋಸೆಫ್ ಪಿಎಂ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲೆಯ ಮುಖ್ಯ ಶಿಕ್ಷಕ  ಶೀನಪ್ಪ ಗೌಡ ಮಾತಾನಾಡಿ ಪೆಟ್ರೋನೆಟ್ ನವರ ಇಂಥ ಉತ್ತಮ ಕಾರ್ಯಕ್ರಮ ದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಕಾರ್ಯಕ್ರಮ ಮಕ್ಕಳ ಪ್ರಾರ್ಥನ ಗೀತೆಯೊಂದಿಗೆ ಆರಂಭ ವಾಯಿತು. ಸುಜಾತಾ ಸ್ವಾಗತಿಸಿ, ಕುಮಾರಿ ವೇದಾವತಿ ಧನ್ಯವಾದಗೈದ ಕಾರ್ಯಕ್ರಮ ವನ್ನು ನಿಶಾಂತ್ ನಿರೂಪಿಸಿ ದರು, ಶಾಲೆಯ ಎಲ್ಲಾ ಶಿಕ್ಷಕರು ಸಹಕರಿಸಿದರು, ಕಾರ್ಯಕ್ರಮದಲ್ಲಿ  ಮಹೇಶ್ ಹೆಗ್ಡೆ ಯವರನ್ನು ಶಾಲೆಯ ವತಿಯಿಂದ ಅಭಿನಂದಿಸಲಾಯಿತು

LEAVE A REPLY

Please enter your comment!
Please enter your name here