ಗೇರುಕಟ್ಟೆ : ಇಲ್ಲಿಯ ಮಾತೃದಯಾ ಕಾಂಪ್ಲೆಕ್ಸ್ ಎದುರು ರಾಜ್ಯದ ಹೆದ್ದಾರಿ ರಸ್ತೆಯಲ್ಲಿ ಬೈಕ್ ಮತ್ತು ಟಾ ಟಾ ಎಸಿ ಟೆಂಪೋ ಮುಖಾ-ಮುಖಿ ಡಿಕ್ಕಿ ಹೊಡೆದ ಘಟನೆ ನ.8 ರಂದು ಮಧ್ಯಾಹ್ನ ಸಂಭವಿಸಿದೆ.
ಬೈಕ್ ಸವಾರ ಸ್ಥಳೀಯರಾದ ನಿವೃತ್ತ ಸೈನಿಕ ದಿನೇಶ್ ಗೌಡ ಕೆ. ಮಂಗಳೂರಿನಲ್ಲಿ ಉದ್ಯೋಗ ನಿಮಿತ್ತ ಗುರುವಾಯನಕೆರೆ ಕಡೆಗೆ ತನ್ನ ಬಜಾಜ್ ಪಲ್ಸರ್ ಬೈಕ್ ನಲ್ಲಿ ಚಲಿಸುವಾಗ ಗೇರುಕಟ್ಟೆ ಪಕ್ಕದಲ್ಲಿರುವ ನ್ಯಾಯಬೆಲೆ ಅಂಗಡಿಯಿಂದ ಸಾಮಾನು ಹೇರಿಸಿ ಕೊಂಡು ಉಪ್ಪಿನಂಗಡಿ ಕಡೆಗೆ ತಿರುಗುವ ಸಮಯದಲ್ಲಿ ಈ ಘಟನೆ ಸಂಭವಿಸಿದೆ.
ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿದ್ದು ತಕ್ಷಣ ಸ್ಥಳೀಯರು ಗಾಯಾಳುವನ್ನು ಗುರುವಾಯನಕೆರೆ ಖಾಸಗಿ ಆಸ್ಪತ್ರೆ ಸೇರಿಸಲು ಸಹಕರಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.