![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಹಾಗೂ ಸರ್ವಶ್ರೀ ಮಹಾ ಸಂಘ ಕಳೆಂಜ ಇವುಗಳ ಸಹಭಾಗಿತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ- ಸಹಾಯ ಸಂಘಗಳ ಮಹಿಳೆಯರಿಗಾಗಿ ಸಂಘೋತ್ಸವ- 2022 ಎಂಬ ವಿನೂತನ ಕಾರ್ಯಕ್ರಮವನ್ನು ನ.10 ರಂದು ಕಾರ್ಯತ್ತಡ್ಕ ಸಂತ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಯಿತು.
ಕಾಯರ್ತ್ತಡ್ಕ ಸಂತ ಸೆಬಾಸ್ಟಿಯನ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಜೋಸೆಫ್ ವಾಳುಕಾರನ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ವಶ್ರೀ ಮಹಾ ಸಂಘದ ಅಧ್ಯಕ್ಷರಾದ ಶ್ರೀಮತಿ ಶೀಲಾ ಮ್ಯಾಥ್ಯೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು ಹಾಗೂ ಹೊರಾಂಗಣ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು. ಕಳೆಂಜ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ. ಪ್ರಸನ್ನ ಎ.ಪಿ., ಸ್ಥಳೀಯ ಕಾನ್ವೆಂಟಿನ ಧರ್ಮ ಭಗಿನಿಯರಾದ ಸಿಸ್ಟರ್ ಮರ್ಸಿ ಎಸ್.ಹೆಚ್., ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಏಲಿಯಮ್ಮ ತೋಮಸ್ ಹಾಗೂ ಕೋಶಾಧಿಕಾರಿಯಾದ ಶ್ರೀಮತಿ ಉಷಾ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಡಿ.ಕೆ.ಆರ್.ಡಿ ಎಸ್ ಸಂಸ್ಥೆಯ ಮಹಿಳಾ ಸಶಕ್ತತಾ ಯೋಜನಾ ಸಂಯೋಜಕಿಯಾದ ಶ್ರೀಮತಿ ಸಿಸಿಲಿಯಾ ತಾವ್ರೋ ಕಾರ್ಯಕ್ರಮ ನಿರೂಪಿಸಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗ, ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಸಿ.ವಿ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ದುಡಿದು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.