ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡಿದ್ದ ಪುತ್ತೂರು ಉಪವಿಭಾಗದ ಡಿವೈಎಸ್ಪಿ ದಿನಕರ ಶೆಟ್ಟಿ, ನಗರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಮತ್ತು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿದ್ದ ನಾಗೇಶ್ ಕದ್ರಿಯವರು ಸ್ವಸ್ಥಾನಕ್ಕೆ ಆಗಮಿಸಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ಡಿವೈಎಸ್ಪಿ ಆಗಿದ್ದ ದಿನಕರ ಶೆಟ್ಟಿಯವರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಡಿವೈಎಸ್ಪಿಯಾಗಿ ಪುತ್ತೂರು ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕರವರನ್ನು ಕೊಡಗು ಜಿಲ್ಲೆಯ ಡಿಎಸ್ಬಿಗೆ ವರ್ಗಾವಣೆ ಮಾಡಲಾಗಿತ್ತು. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕದ್ರಿಯವರನ್ನು ಕೊಡಗು ಜಿಲ್ಲೆಯ ಡಿಸಿಐಬಿಗೆ ವರ್ಗಾವಣೆಗೊಳಿಸಲಾಗಿತ್ತು. ಇದೀಗ ದಿನಕರ ಶೆಟ್ಟಿಯವರನ್ನು ಪುತ್ತೂರು ಉಪವಿಭಾಗಕ್ಕೆ ವರ್ಗಾವಣೆಗೊಳಿಸಲಾಗಿದ್ದು, ಪುತ್ತೂರು ಡಿವೈಎಸ್ಪಿಯಾಗಿದ್ದ ಮುರಳೀಧರ ಪಿ.ಕೆ.ರವರನ್ನು ಮತ್ತೆ ಸೋಮವಾರ ಪೇಟೆಗೆ ವರ್ಗಾವಣೆ ಮಾಡಲಾಗಿದೆ. ತಿಮ್ಮಪ್ಪ ನಾಯ್ಕರವರನ್ನು ಮತ್ತೆ ಪುತ್ತೂರಿಗೆ ಮತ್ತು ನಾಗೇಶ್ ಕದ್ರಿಯವರನ್ನು ಮತ್ತೆ ಗ್ರಾಮಾಂತರಕ್ಕೆ ವರ್ಗಾವಣೆಗೊಳಿಸಲಾಗಿದೆ. ಪುತ್ತೂರು ವೃತ್ತ ನಿರೀಕ್ಷಕರಾಗಿರುವ ಶಶಿಕುಮಾರ್ರವರನ್ನು ಮತ್ತೆ ಲೋಕಾಯುಕ್ತಕ್ಕೆ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿರುವ ಮಂಜುನಾಥರವರನ್ನು ಮತ್ತೆ ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.