ಬಳ್ಳಮಂಜ : ಇತಿಹಾಸ ಪ್ರಸಿದ್ಧ ಬಳ್ಳ ಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೇವಳ ಗದ್ದೆಯಲ್ಲಿ ಜರಗುವ 25ನೇ ವರ್ಷದ ಶೇಷ ನಾಗ ಜೋಡುಕರೆ ಕಂಬಳದ ಸಮಾಲೋಚನಾ ಸಭೆಯು ದೇವಸ್ಥಾನದ ವಠಾರದಲ್ಲಿ ನ.13ರಂದು ನಡೆಯಿತು.
ಕಂಬಳ ಸಮಿತಿ ಅಧ್ಯಕ್ಷ ಪದ್ಮನಾಭ ಸುವರ್ಣಅಧ್ಯಕ್ಷತೆಯಲ್ಲೀ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ. ಹರ್ಷ ಸಂಪಿಗೆತ್ತಾಯ, ಕಂಬಳ ಸಮಿತಿ ಉಪಾಧ್ಯಕ್ಷ ಪ್ರಮೋದ್ ಕುಮಾರ್, ಕಾರ್ಯದರ್ಶಿ ವಸಂತ ಮರಕಡ ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಕಂಬಳ ಸಮಿತಿ ಪದಾಧಿಕಾರಿಗಳು, ಸದಸ್ಯರು, ಊರ ಗಣ್ಯರು ಭಾಗವಹಿಸಿ ಆಚರಣೆ ಬಗ್ಗೆ ಯೋಜನೆ ರೂಪಿಸಲಾಯಿತು