ಪುತ್ತೂರು: ಬಿಜೆಪಿ ಸಂಸದೀಯ ಸಮಿತಿ ಸಹ ಸಚೇತಕರಾಗಿ ದ.ಕ. ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶೋಭಾ ಕರಂದ್ಲಾಜೆ ನೇಮಕವಾಗಿದ್ದಾರೆ.
ಜೂ.17ರಿಂದ ಜು.28ರ ವರೆಗೆ ನಡೆಯಲಿರುವ ಲೋಕಸಭೆಯ ಅಧಿವೇಶನಕ್ಕೆ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ರಚನೆಯಾಗಿದ್ದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಸಹ ಸಚೇತಕರಾಗಿ ಆಯ್ಕೆಯಾಗಿದ್ದಾರೆ. ಧಾರವಾಡ ಸಂಸದ ಹಾಗೂ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸರ್ಕಾರದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಲೋಕಸಭಾ ಸದಸ್ಯರಿಗೆ ವಿಪ್ ಜಾರಿಗೊಳಿಸುವ ಅಧಿಕಾರ ಸಚೇತಕರಿಗಿದ್ದು, ನಳಿನ್ ಕುಮಾರ್ ಕಟೀಲ್ ಅವರಿಗೆ ಕರ್ನಾಟಕದ 21 ಸಂಸದರ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ೧೨ ಮಹಿಳಾ ಸಂಸದರ ಹೊಣೆಗಾರಿಕೆ ಇದೆ.